Latestರಾಜ್ಯರಾಷ್ಟ್ರೀಯಸುದ್ದಿ

ಬಹುಕೋಟಿ ಮೇವು ಹಗರಣ: ಲಾಲೂ ಪ್ರಸಾದ್ ಯಾದವ್ ದೋಷಿ

ದೆಹಲಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ ಆರ್​​​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ​ ಅವರನ್ನು ದೋಷಿ ಎಂದು ರಾಂಚಿಯ ವಿಶೇಷ ಕೇಂದ್ರೀಯ ತನಿಖಾ ದಳ ತೀರ್ಪು ನೀಡಿದೆ.

ಜಾರ್ಖಂಡ್‌ನ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂ ಹಣವನ್ನು ಅವರು ಅಕ್ರಮ ಹಿಂಪಡೆದ ಪ್ರಕರಣದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಇನ್ನು ಈ ಪ್ರಕರಣದಲ್ಲಿ ನ್ಯಾಯಾಧೀಶ ಸಿಕೆ ಶಶಿ ಅವರು ಇಂದು ತೀರ್ಪು ಪ್ರಕಟಿಸಿದ್ದು, ಈ ವೇಳೆ ಆರ್​ಜೆಡಿ ಮುಖ್ಯಸ್ಥರು ನ್ಯಾಯಾಲಯದಲ್ಲಿ ಹಾಜರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button