Breaking NewsLatestಕಲಬುರ್ಗಿಜಿಲ್ಲಾ ಸುದ್ದಿರಾಜಕೀಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಿಯಾಂಕ್​​​​​​​​​ ಖರ್ಗೆ

ಕಲಬುರಗಿ: ಕುರ್ಚಿ ಉಳಿಸಿಕೊಳ್ಳಲು ಆರ್ ಎಸ್ ಎಸ್ ತಾಳಕ್ಕೆ ತಕ್ಕಂತೆ ಸಿಎಂ ಬಸವರಾಜ ಬೊಮ್ಮಾಯಿ ಕುಣಿಯುತ್ತಿದ್ದಾರೆಂದು ಕೆಪಿಸಿಸಿ‌ ವಕ್ತಾರ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹಿಜಾಬ್ ವಿವಾದ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಬ್ಬಿದ್ದು, ಹೀಗೆ ಹರಿಬಿಟ್ಟಿದ್ದು ಯಾರು ? ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಕೋವಿಡ್ ಮೂರು ಅಲೆಗಳಿಂದ ಶಾಲೆಗಳು ಬಂದ್ ಆಗಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಈಗ ಎದ್ದಿರುವ ವಿವಾದದಿಂದಾಗಿ ಶಾಲೆ ಬಂದ್ ಮಾಡುವ ನಿರ್ಧಾರವನ್ನ ಶಾಲಾ ಸಮಿತಿಗೆ ಬಿಡಲಾಗಿದೆ. ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಮಕ್ಕಳ ಶಿಕ್ಷಣದ ಬಗ್ಗೆ ಗಾಂಭೀರ್ಯತೆ ಇಲ್ಲದ ಸರ್ಕಾರ ಕತ್ತೆ ಕಾಯುತ್ತಿದೆಯಾ ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಕೇಸರಿ ಶಾಲು ಹಂಚುತ್ತಿರುವುದು ಯಾರು? ರಾಷ್ಟ್ರ ಧ್ವಜದ ಸ್ಥಂಬದಲ್ಲಿ ಕೇಸರಿ ಧ್ಚಜ ಹಾರಿಸಿದ್ದು ಯಾರು? ಈ ಬಗ್ಗೆ ಮಾಹಿತಿ‌ ಇಲ್ಲವೇ? ಗೃಹ ಸಚಿವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ‌. ಗೃಹ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಅವರೇ ಹೇಳಿದ್ದಾರೆ. ಹೀಗಿರುವಾಗ ಕಾನೂನು ಸುವ್ಯವಸ್ಥೆ ಕುಸಿಯುತ್ತದೆ ಎಂದರು

ಕೇಸರಿ ತ್ಯಾಗ ಸಂಕೇತ ಎಂದು ಹೇಳಲಾಗುತ್ತಿದೆಯಲ್ಲ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಕೇರಳ ಹೈಕೋರ್ಟ್ ಹಾಗೂ ಸುಪ್ರಿಂ ಕೋರ್ಟ್ ಈ‌ ವಿಚಾರದಲ್ಲಿ ಸ್ಪಷ್ಟಪಡಿಸಿದೆ. ಕೈಬಳೆ, ಕುಂಕುಮ, ತಾಯತ, ಹಿಜಾಬ್ ಗಳು ಹಾಗೂ ಸಿಖ್ಖರ ಟರ್ಬನ್ ಆಯಾ ಧರ್ಮದ ಸಂಪ್ರದಾಯಗಳು ಎಂದು ಹೇಳಿವೆ. ಆದರೆ ಕೇಸರಿ‌ಶಾಲು ಏನು? ಇದು ಯಾವ ಧರ್ಮದ ಸಂಕೇತ? ಇದು ಕೇವಲ ರಾಜಕೀಯ ಪ್ರೇರಿತ ಸಂಕೇತವಾಗಿದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button