Latestರಾಷ್ಟ್ರೀಯಸುದ್ದಿ

Tamil Nadu Rains: ತಮಿಳುನಾಡಿನಲ್ಲಿ ಭಾರೀ ಮಳೆ : ಮೂರು ಜಿಲ್ಲೆಗಳಿಗೆ ರೆಡ್​​ ಅಲರ್ಟ್​ ಘೋಷಣೆ

ಚೆನ್ನೈ: ತಮಿಳುನಾಡಿನ ಹಲವೆಡೆ ಭಾರೀ ಮಳೆಯಿಂದಾಗಿ ಪಟ್ಟಣ ಪ್ರದೇಶಗಳು ಜಲಾವೃತಗೊಂಡಿದ್ದು, ಚೆನ್ನೈ ಮತ್ತು ಪಕ್ಕದ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಕಳೆದ ರಾತ್ರಿ ಮಳೆಗೆ ಕಂಬ ಉರುಳಿಬಿದ್ದು ವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ.

ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲೆಪಟ್ಟು ಜಿಲ್ಲಾಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲಾಗಳಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ಕಚೇರಿಗಳು ಮುಚ್ಚಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button