Latestಜಿಲ್ಲಾ ಸುದ್ದಿಶಿವಮೊಗ್ಗ
ಹರ್ಷ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಬಂಧಿಸಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಹತ್ಯೆ ಪ್ರಕರಣದ ಸಂಬಂಧ ಪೊಲೀಸರು ನಿನ್ನೆ, ಸೋಮವಾರ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರೂ ಶಿವಮೊಗ್ಗ ಮೂಲದವರಾಗಿದ್ದು, ಇದಲ್ಲದೆ, 12 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆಂದು ಹೇಳಲಾಗಿದೆ.



