Latestಮನರಂಜನೆಸಿನಿಮಾ

ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ಚಿತ್ರರಂಗದಿಂದ ಕಂಬನಿ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಡೀ ದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಇದೀಗ ಲತಾ ಮಂಗೇಶ್ಕರ್ ಚಿತ್ರರಂಗದಿಂದ ಕಂಬನಿ ಮಿಡಿದಿದ್ದಾರೆ. ಸ್ಯಾಂಡಲ್​ವುಡ್​ನ ದಿಗ್ಗಜರು ಲತಾ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಕೆಲವರು ಲತಾ ಕಂಠದಲ್ಲಿ ಮೂಡಿಬಂದ ಹಾಡಿನಲ್ಲಿ ತಮ್ಮಿಷ್ಟದ ಸಾಂಗ್​ ಯಾವುದು ಎನ್ನುವ ಬಗ್ಗೆ ನೆನಪು ಮಾಡಿಕೊಳ್ಳುತ್ತಿದ್ದಾರೆ.

ಶಿವಣ್ಣ ಕಂಬನಿ: ನಟ ಶಿವರಾಜ್​ಕುಮಾರ್​ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಲತಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಲತಾ ಅವರ ಫೋಟೋ ಪೋಸ್ಟ್​ ಮಾಡಿ, ನನ್ನ ಅತ್ಯಂತ ನೆಚ್ಚಿನ ಧ್ವನಿ. ಸಂಗೀತದ ಮೂಲಕ ಹಲವು ಭಾವನೆಗಳನ್ನು ಅನುಭವಿಸುವಂತೆ ಮಾಡಿದ ನಿಮಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ರಮೇಶ್​ ಅರವಿಂದ್​:
ಖ್ಯಾತ ನಟ ರಮೇಶ್​ ಅರವಿಂದ್​ ಅವರಿಗೂ ಲತಾ ನಿಧನದ ಸುದ್ದಿ ದುಃಖ ತಂದಿದೆ. ಲತಾ ಅವರ ಫೋಟೋ ಪೋಸ್ಟ್​ ಮಾಡಿರುವ ರಮೇಶ್​ ಅರವಿಂದ್​ ಅವರು, ವಿದಾಯ, ಸಂಗೀತದ ಸ್ವರಗಳು ಸ ರಿ ಗ ಮ ಪ ಲ ತಾ ಎಂಬಂತೆ ನಮಗೆ ಭಾಸವಾಗುವಂತೆ ಮಾಡಿದಿರಿ ಎಂದು ಬರೆದುಕೊಂಡಿದ್ದಾರೆ.

ಟಿ.ಎನ್​. ಸೀತಾರಾಮ್​: ಖ್ಯಾತ ಕಿರುತೆರೆ ನಿರ್ದೇಶಕ ಟಿ.ಎನ್​. ಸೀತಾರಾಮ್​ ಅವರು ಕೂಡ ಲತಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ನೆಚ್ಚಿನ ಹಾಡುಗಳನ್ನು ನೆನಪು ಮಾಡಿಕೊಂಡಿದ್ದಾರೆ. ‘ನಾನು ಕಾಲೇಜಿಗೆ ಹೋಗುತ್ತಿದ್ದ ಸಮಯ. ‘ಬೀಸ್​ ಸಾಲ್​ ಬಾದ್​’ ಚಿತ್ರ ತೆರೆಗೆ ಬಂದಿತ್ತು. ಕಾಲೇಜಿಗೆ ಚಕ್ಕರ್​ ಹೊಡೆದು ಸಿನಿಮಾ ನೋಡೋಕೆ ಹೋಗಿದ್ವಿ. ಆ ಸಿನಿಮಾದ ಹಾಡಿಗಾಗಿ, ಮೂರು ದಿನ ಸತತ ಅದೇ ಚಿತ್ರ ನೋಡಿದ್ದೆ. ಈ ಚಿತ್ರದ ಹಾಡುಗಳಿಗೆ ಲತಾ ಧ್ವನಿ ನೀಡಿದ್ದರು ಎಂದಿದ್ದಾರೆ’ ಸೀತಾರಾಮ್​.

Spread the love

Related Articles

Leave a Reply

Your email address will not be published. Required fields are marked *

Back to top button