Breaking NewsLatestUncategorizedಜಿಲ್ಲಾ ಸುದ್ದಿರಾಮನಗರ

ಇದು ಅಧಿಕಾರಕ್ಕಾಗಿ ಕಿತ್ತಾಡುವ ಹೊತ್ತಲ್ಲ; ಬಿಜೆಪಿಗೆ ಎಚ್​ಡಿಕೆ ಕುಟುಕು

ರಾಮನಗರ: ಕೊರೊನಾ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಕಿತ್ತಾಟ ಮಾಡುವುದು ಸರಿಯಲ್ಲ, ಈ ಸಂದರ್ಭದಲ್ಲಿ ಯಾರೂ ಸಹ ರಾಜಕೀಯ ಮಾಡಬಾರದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾವಿ ಸಲಹೆ ನೀಡಿದ್ದಾರೆ.

ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆರೋಗ್ಯ ಇಲಾಖೆ ವತಿಂದ ಹಮ್ಮಿಕೊಂಡಿದ್ದ ಕೊರೊನಾ ಲಸಿಕೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿ ಮುಖ್ಯಮಂತ್ರಿಯನ್ನ ಬದಲಾವಣೆ ಮಾಡೋದಾದರೆ ಮಾಡಿ, ಇಲ್ಲಾಂದ್ರೆ ಮುಂದುವರೆಸುವುದಾದ್ರೆ ಮುಂದುವರೆಸಿ, ಈ ವಿಚಾರವಾಗಿ ನಾನು ಆ ಪಕ್ಷದ ಹೈಕಮಾಂಡ್‌ಗೆ ಹೇಳ್ತೇನೆ ಸಿಎಂ ಬದಲಾವಣೆ ಬಗ್ಗೆ ಒಂದು ಸ್ಪಷ್ಟನೆ ನೀಡಿ, ಇನ್ನೆರಡು ವರ್ಷದಲ್ಲಿ ಚುನಾವಣೆ ಬರಲಿದೆ, ಹಾಗಾಗಿ ಈ ಸಂದರ್ಭದಲ್ಲಿ ರಾಜಕೀಯ ಬಿಟ್ಟು ಜನರ ಸೇವೆ ಮಾಡೋಣ ಅಂತಾ ಹೇಳಿದರು.

ರಾಜ್ಯದ ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಪಕ್ಷಗಳು ರಾಜಕಾರಣ ಮಾಡಬಾರದು, ಒಂದು ವೇಳೆ ರಾಜಕಾರಣ ಮಾಡಿದ್ರೆ ರಾಜ್ಯದ ಜನರ ಜತೆಗೆ ಚೆಲ್ಲಾಟ ಆಡಿದಂತಾಗುತ್ತದೆ ಅಂತಾ ಎರಡು ಪಕ್ಷಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button