Uncategorized
ಭಾರತ-ಪಾಕಿಸ್ತಾನ ಸರಣಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸಚಿವ ಸಚಿವ ಎಸ್.ಜೈಶಂಕರ್

ಮುಂಬೈ: ಈ ಬಾರಿ ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯಲಿದೆ, ಆದರೆ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಕಷ್ಟ ಎನ್ನಲಾಗಿದೆ. ಈ ನಡುವೆ ಕೆಲವು ತಿಂಗಳ ಹಿಂದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತ ತಂಡವು ಪಾಕಿಸ್ತಾನ ಪ್ರವಾಸಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು.
ಜಯ್ ಶಾ ಅವರ ಹೇಳಿಕೆಯಿಂದ ಕೋಪಗೊಂಡ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ, ಭಾರತದಲ್ಲಿ ನಡೆಯಲಿರುವ 50 ಓವರ್ಗಳ ವಿಶ್ವಕಪ್ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಏತನ್ಮಧ್ಯೆ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಸರಣಿ ಮತ್ತು ಏಷ್ಯಾ ಕಪ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ನಮ್ಮ ಆಲೋಚನೆ ಏನು ಎಂದು ಎಲ್ಲರಿಗೂ ತಿಳಿದಿದೆ ಎಂದು ಜೈಶಂಕರ್ ಹೇಳಿದ್ದು, ನೆರೆಯ ರಾಷ್ಟ್ರ ಪಾಕಿಸ್ತಾನವು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿದರೆ ಮಾತ್ರ ಎರಡೂ ದೇಶಗಳ ನಡುವೆ ಕ್ರಿಕೆಟ್ ಸರಣಿಯನ್ನು ಆಯೋಜಿಸಲು ಸಾಧ್ಯ ಎಂದು ವಿದೇಶಾಂಗ ಸಚಿವರು ಸ್ಪಷ್ಟಪಡಿಸಿದ್ದಾರೆ.

